ಬೆಂಗಳೂರು
“ಮುದ್ದುಲಕ್ಷ್ಮಿ” ಸೀರಿಯಲ್ ನಟ ಲೈಂಗಿಕ ಕಿರುಕುಳದ ಆರೋಪದಡಿ ಅರೆಷ್ಟ್..!

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಿರುತೆರೆ ನಟ ಚರಿತ್ ಬಾಳಪ್ಪ ಎಂಬುವವರನ್ನು ಆರ್ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ..
ಕನ್ನಡದಲ್ಲಿ ‘ಮುದ್ದುಲಕ್ಷ್ಮಿ’ ಸೇರಿದಂತೆ ಕೆಲವು ಸೀರಿಯಲ್ನಲ್ಲಿ, ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ.
ಪ್ರೀತಿಸುವ ನಾಟಕವಾಡಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುವತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.