Uncategorized

ಅಪಾರ್ಟ್ಮೆಂಟ್ ಗೆ ನುಗ್ಗಿ ಮಹಿಳೆ ಮಂಗಳಸೂತ್ರ ಕಿತ್ತುಕೊಂಡು ಕತ್ತು ಹಿಸುಕಿ ಕೊಲೆಗೈದ ದುಷ್ಕರ್ಮಿಗಳು

ಬೆಳಗಾವಿಯಲ್ಲಿ ಗಣೇಶಪುರದ  ಲಕ್ಷ್ಮೀ ನಗರದ ನಿವಾಸಿ ಅಂಜನಾ ಅಜೀತ ದಡ್ಡೀಕರ್(49) ಕೊಲೆಯಾದ ದುರ್ದೈವಿ. ಅಪಾರ್ಟ್ಮೆಂಟ್ ನಲ್ಲಿ ಗಂಡ-ಹೆಂಡತಿ ಮಾತ್ರ ವಾಸವಾಗಿದ್ದರು . ಅಜೀತ್ ದಡ್ಡೀಕರ್

 ಆಟೋ ರೀಕ್ಷಾ ಮಾಡಿ ಜೀವನ ಸಾಗಿಸುತ್ತಿದ್ದ. ಪತಿ ಅಜೀತ್ ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದ್ದು. ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನ ಬೆಳಗಾವಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ.

ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿ ಬಂಗಾರ ಉಂಗುರು ಕದ್ದು ಕೊಲೆ  ಮಾಡಿದ್ದಾರೆ ಎಂದು ಕುಟುಂಬಸ್ಥರು  ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳಿಂದ ಪರಿಶೀಲನೆ ನಡೆಸಲಾಗುತ್ತಿದ್ದು.ಸ್ಥಳಕ್ಕೆ ಕ್ರೈಮ್ ಡಿಸಿಪಿ ನಿರಂಜನರಾಜೆ ಅರಸ್,ಕ್ಯಾಂಪ್ ಪೊಲೀಸ ಠಾಣಾ ಸಿಪಿಐ ಆಲ್ತಾಫ್ ಮುಲ್ಲಾ ಭೇಟಿ, ಪರಿಶೀಲನೆನಡೆಸುತ್ತಿದ್ದಾರೆ. ಇನ್ನು ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button