-
Uncategorized
ಕುಡಿಯುವ ನೀರಿನ ಘಟಕವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಶುಕ್ರವಾರದಂದು ಉದ್ಘಾಟಿಸಿದರು.
ಘಟಪ್ರಭಾ:ಗೋಕಾಕ ಮತಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಅಣ್ಣಾ ಜಾರಕಿಹೊಳಿರವರ ಆಪ್ತ ಸಹಾಯಕರಾದ ಶ್ರೀ ಸುರೇಶ ಸನದಿ ಅವರು ಘಟಪ್ರಭಾ ಪಟ್ಟಣಕ್ಕೆ ಆಗಮಿಸಿ ಪುರಸಭೆಯ ಮಲ್ಲಾಪೂರ ಪಿಜಿ ತರಕಾರಿ ಮಾರುಕಟ್ಟೆಯಲ್ಲಿ ನೂತನ ನಿರ್ಮಾಣ ಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಶುಕ್ರವಾರದಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಎಮ್ ಎಸ್ ಪಾಟೀಲ,ಹಿರಿಯ ಮುಖಂಡರಾದ ಡಿ ಎಮ್ ದಳವಾಯಿ,ಸುದೀರ ಜೋಡಟ್ಟಿ,ರಮೇಶ ತುಕ್ಕಾನಟ್ಟಿ,ಕಲ್ಲಪ್ಪ ಕೊಂಕಣಿ,ಕೆಂಪಣ್ಣ ಕಾಡದವರ,ಲಗಮಣ್ಣ ನಾಗನ್ನವರ,ಕೆಂಪಣ್ಣ ಚೌಕಶಿ,ಕುಮಾರ ಹುಕ್ಕೇರಿ,ಮಾಜಿ ಪ ಪಂ ಸರ್ವ ಸದಸ್ಯರು,ಪುರಸಭೆ ಸರ್ವ ಸಿಬ್ಬಂದಿ…
Read More » -
Uncategorized
ನಗು ಮುಖದ ನಾಯಕನಾಗಿ ಜನಮನ ಗೆದ್ದ ನಾಯಕ
ನಗು ಮುಖದ ನಾಯಕನಾಗಿ ಜನಮನ ಗೆದ್ದ ನಾಯಕ ಜನರೊಂದಿಗೆ ಸದಾ ನಗುನಗುತ್ತಾ ಮಾತನಾಡುವ, ಸೌಮ್ಯ ಸ್ವಭಾವ ಹಾಗೂ ಸರಳ ಜೀವನಶೈಲಿಯಿಂದ ಗುರುತಿಸಿಕೊಂಡಿರುವ ನಗು ಮುಖದ ನಾಯಕರು ಇಂದು ಜನಮೆಚ್ಚುಗೆ ಪಡೆದಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳು ಹಾಗೂ ಜನ ಸಂಪರ್ಕದ ವೇಳೆಯಲ್ಲಿ ನಗುವಿನೊಂದಿಗೆ ಮಾತನಾಡುವ ಅವರ ಶೈಲಿ ಜನರಿಗೆ ಆತ್ಮೀಯತೆಯ ಅನುಭವ ನೀಡುತ್ತಿದೆ. ಕಠಿಣ ಸಂದರ್ಭಗಳಲ್ಲಿಯೂ ಸಹ ಧೈರ್ಯ ಕಳೆದುಕೊಳ್ಳದೆ, ಸಮಸ್ಯೆಗಳಿಗೆ ಧನಾತ್ಮಕವಾಗಿ ಸ್ಪಂದಿಸುವ ಗುಣವೇ ಅವರ ನಾಯಕತ್ವದ ಶಕ್ತಿಯಾಗಿದೆ. ಜನರ ನೋವು-ನಲಿವಿಗೆ ಸ್ಪಂದಿಸುವ ಮನೋಭಾವ, ನೇರ ಮಾತು ಹಾಗೂ ಸರಳ ವರ್ತನೆಯಿಂದ ಅವರು ಎಲ್ಲ…
Read More » -
ರಾಜಕೀಯ
ಲಕ್ಕಣ್ ಅಣ್ಣ ಜಾರಕಿಹೊಳಿ ಬೆಳಗಾವಿ ವಿಧಾನ ಪರಿಷತ್ ಸದಸ್ಯರು ಇವರಿಗೆ ಕೂಡಲಸಂಗಮದ 39ನೇ ಶರಣ ಮೇಳದ ಕಾರ್ಯಕ್ರಮಕ್ಕೆ ಆಹ್ವಾನ
ಸನ್ಮಾನ್ಯ ಶ್ರೀ ಲಕ್ಕಣ್ ಅಣ್ಣ ಜಾರಕಿಹೊಳಿ ಬೆಳಗಾವಿ ವಿಧಾನ ಪರಿಷತ್ ಸದಸ್ಯರು ಇವರಿಗೆ ಕೂಡಲಸಂಗಮದ 39ನೇ ಶರಣ ಮೇಳದ ಕಾರ್ಯಕ್ರಮಕ್ಕೆ ಆಹ್ವಾನಿಸಲು ರಾಷ್ಟ್ರೀಯ ಬಸವ ದಳದ ಅಧ್ಯಕ್ಷರ ನೇತೃತ್ವದಲ್ಲಿ ಆಮಂತ್ರಣ ಪತ್ರಿಕೆ ನೀಡಿ ಗೌರವ ಪೂರ್ವಕವಾಗಿ ಆಮಂತ್ರಿಸಲಾಯಿತು ಅಧ್ಯಕ್ಷರು ರಾಷ್ಟ್ರೀಯ ಬಸವದಳ ಬಸವ ಮಂಟಪ ಪ್ರತಿಷ್ಠಾನ ವಿದ್ಯಾನಗರ ಗೋಕಾಕ
Read More » -
ರಾಜಕೀಯ
ನಕಲಿ ಮುಟೇಷನ್ ದಾಖಲೆ ಸೃಷ್ಟಿಸಿ ವಂಚನೆ ಆರೋಪ: ಡಿಸಿಸಿ ಬ್ಯಾಂಕ್ ನಿರ್ದೇಶಕ ಸೇರಿ ಮೂವರ ವಿರುದ್ಧ ದೂರು
ಯಾದಗಿರಿ: ಭೂಮಿಯ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ನಕಲಿ ಮುಟೇಶನ್ (Mutation) ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಸೀಲ್ ಹಾಗೂ ಮೊಹರುಗಳನ್ನು ದುರುಪಯೋಗಪಡಿಸಿಕೊಂಡು ವಂಚನೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರೊಬ್ಬರು ಸೇರಿದಂತೆ ಮೂವರ ವಿರುದ್ಧ ಜಿಲ್ಲೆಯ ಸುರಪುರ (ಶೋರಾಪೂರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಪುರ ತಾಲೂಕಿನ ತಿಮ್ಮಾಪುರ ಕಾಲೋನಿಯ ನಿವಾಸಿ ಅಶೋಕ ಸಜ್ಜನ್ (58) ಅವರು ನೀಡಿದ ದೂರಿನ ಮೇರೆಗೆ, ಬಸವರಾಜ ಸಜ್ಜನ್, ಸುರೇಶ ಸಜ್ಜನ್ ಹಾಗೂ ಪ್ರಕಾಶ ಸಜ್ಜನ್ ಎಂಬವರ ವಿರುದ್ಧ ಐಪಿಸಿ ಕಲಂಗಳು 464, 465, 468, 471 ಮತ್ತು 420…
Read More » -
ರಾಜಕೀಯ
ಮನರೇಗಾ ರದ್ದು: ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್ ಜಿ ಎಂದು ಪುನರ್ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕಾನೂನು ಹೋರಾಟ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್, “ಸಂಪುಟ ಸಭೆಯಲ್ಲಿ ಮನರೇಗಾ ರದ್ದು ಬಗ್ಗೆ ಚರ್ಚೆ ಆಗಿದೆ. ನರೇಗಾ ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನ ಮಾಡಲಾಗಿದೆ. ಈ ವಿಚಾರವನ್ನು ಹೋರಾಟದ ಮೂಲಕ ಜನರ ಬಳಿಯೂ ಕೊಂಡೊಯ್ಯಲಿದ್ದೇವೆ.…
Read More » -
Uncategorized
ಕೋರ್ಟ್ನಲ್ಲಿ ಪ್ರತ್ಯೇಕ ದೂರು ದಾಖಲಿಸುವೆ: ಶಾಸಕ ಜನಾರ್ದನ ರೆಡ್ಡಿ
ಬಳ್ಳಾರಿ: ಬ್ಯಾನರ್ ಗಲಾಟೆಗೆ ಸಂಬಂಧಿಸಿದಂತೆ ಕೋರ್ಟ್ನಲ್ಲಿ ಪ್ರತ್ಯೇಕ ದೂರು ದಾಖಲಿಸುವೆ ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಹೇಳಿದ್ದಾರೆ. ಈಗಾಗಲೇ ಬ್ರೂಸ್ಪೇಟೆ ಠಾಣೆಯಲ್ಲಿ ಶಾಸಕ ಭರತ್ ರೆಡ್ಡಿ, ಅವರ ಅಪ್ತ ಸತೀಶ್ ರೆಡ್ಡಿ, ಎಎಸ್ಪಿ ಕೆ.ಪಿ.ರವಿಕುಮಾರ್, ಡಿವೈಎಸ್ಪಿ ಚಂದ್ರಕಾಂತ್ ನಂದರೆಡ್ಡಿ ವಿರುದ್ಧ ದೂರು ನೀಡಿದ್ದು ಈವರೆಗೂ ಪ್ರಕರಣ ದಾಖಲಿಸಿಲ್ಲ. ಜಿಲ್ಲೆಗೆ ಹೊಸದಾಗಿ ಐಜಿಪಿ, ಎಸ್ಪಿ ಖಡಕ್ ಅಧಿಕಾರಿಗಳು ನೇಮಕಗೊಂಡಿದ್ದು ಯಾವ ರೀತಿಯಲ್ಲಿ ತನಿಖೆ ಮಾಡಲಿದ್ದಾರೆ ಎಂಬುದಾಗಿ ಕಾದು ನೋಡುವೆ ಎಂದು ಶಾಸಕ ರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್ಪಿ ಸರ್ಕಲ್ನಲ್ಲಿ ಶಾಸಕ ಭರತ ರೆಡ್ಡಿಯನ್ನು…
Read More » -
ರಾಜಕೀಯ
ತುಂಬು ಗರ್ಭಿಣಿ ಪತ್ನಿ, ಮಕ್ಕಳ ಮದುವೆಗೆ ಅಪ್ಪ – ಅವ್ವ ಹೆಣ್ಣು ಹುಡುಕುತ್ತಿದ್ದರು:ಇನಾಮದಾರ ಕಾರ್ಖಾನೆ ದುರಂತದ ಕಣ್ಣೀರಿನ ಕಥೆಯಿದು!
ಬೆಳಗಾವಿ: ಬೈಲಹೊಂಗಲ ತಾಲೂಕಿನ ಮರಕುಂಬಿಯ ಇನಾಮದಾರ ಸಕ್ಕರೆ ಕಾರ್ಖಾನೆ ದುರಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದರಿಂದ ದುರಂತದಲ್ಲಿ ಗಾಯಗೊಂಡಿದ್ದ ಎಲ್ಲ 8 ಕಾರ್ಮಿಕರು ಮೃತಪಟ್ಟಂತೆ ಆಗಿದೆ. ಗೋಕಾಕ ತಾಲೂಕಿನ ಗಿಳಿಹೊಸೂರ ಗ್ರಾಮದ ರಾಘವೇಂದ್ರ ಮಲ್ಲಪ್ಪ ಗಿರಿಯಾಳ(36) ಇಂದು ಸಂಜೆ ಮೃತಪಟ್ಟಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಕೆಲ ಗಂಟೆಯಲ್ಲೆ ಮೂವರು ಕಾರ್ಮಿಕರು ಅಸುನೀಗಿದ್ದರು. ಇಂದು ಬೆಳಗ್ಗೆ ನಾಲ್ವರು ಮತ್ತು ಸಂಜೆ ಮತ್ತೋರ್ವ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೃತ ಎಂಟೂ ಜನರದ್ದು ಒಂದೊಂದು…
Read More » -
Uncategorized
ಯೊಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜಾಮೀನು ನೀಡದಂತೆ ಸಿಬಿಐ ವಾದ
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರು ಈ ಹಿಂದೆ ಜಾಮೀನು ಪಡೆಯುವ ವೇಳೆ, ನ್ಯಾಯಾಲಯ ವಿಧಿಸುವ ಎಲ್ಲ ಷರತ್ತುಗಳಿಗೆ ಬದ್ದವಾಗಿರುವುದಾಗಿ ಮುಚ್ಚಳಿಕೆ ಬರೆದುಕೊಟ್ಟು, ಬಳಿಕ ಉಲ್ಲಂಘಿಸಿದ್ದಾರೆ. ಹೀಗಾಗಿ ಮತ್ತೆ ಜಾಮೀನು ನೀಡಬಾರದು ಎಂದು ಕೇಂದ್ರ ತನಿಖಾ ದಳ (ಸಿಬಿಐ) ಹೈಕೋರ್ಟ್ಗೆ ಕೋರಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುನೀಲ್ ದತ್ ಯಾದವ್ ಪೀಠ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ಕೋರಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನೀಲ್…
Read More » -
ರಾಜಕೀಯ
ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ವಿಜಯಪುರದಲ್ಲಿ ಉದ್ಘಾಟಿಸಲಿದ್ದಾರೆ. ಸಿದ್ದರಾಮಯ್ಯನವರು
ವಿಜಯಪುರ :ಸಿಎಂರಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ; ಸಚಿವ ಎಂ.ಬಿ.ಪಾಟೀಲರಿಂದ ಅಂತಿಮ ಹಂತದ ಸಿದ್ಧತೆಗಳ ಪರಿವೀಕ್ಷಣೆ* ಆ್ಯಂಕರ್: ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು …
Read More » -
Uncategorized
ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ
ಬಂಜಾರಾ ಸಮಾಜದಿಂದ ಬೆಳಗಾವಿ ಮಹಾಪೌರರಿಗೆ ಮನವಿ ಬೆಳಗಾವಿ ನಗರದ ಸಂಗಮೇಶ್ವರ ನಗರದಲ್ಲಿರುವ ಮಹಾನಗರ ಪಾಲಿಕೆಯ 14 ಗುಂಟೆ ಜಾಗವನ್ನು ಬಂಜಾರಾ ಸಮುದಾಯದ ಭವನ ನಿರ್ಮಾಣಕ್ಕಾಗಿ ಮಂಜೂರು ಮಾಡಬೇಕೆಂದು ಸಮಾಜದ ಮುಖಂಡರು ಬೆಳಗಾವಿ ಮಹಾಪೌರ ಮಂಗೇಶ್ ಪವಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಳಗಾವಿ ಉತ್ತರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ರಿಂದ 30 ಸಾವಿರದಷ್ಟು ಬಂಜಾರಾ ಸಮುದಾಯದ ಜನಸಂಖ್ಯೆ ಇದ್ದು, ಕಳೆದ ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆ ಇದೇ ಜಾಗದಲ್ಲಿ ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ 3 ಕೋಟಿ ರೂ. ಅನುದಾನದಲ್ಲಿ…
Read More »