• Uncategorized

    ಕನ್ನಡ ಕಿರುತೆರೆ ಹಾಗೂ ರಂಗಭೂಮಿ ನಟ **ಶ್ರೀಧರ್ ನಾಯಕ್ (47)** ಅವರ ಜೀವನ ಮತ್ತು ಅವರ ನಿಧನದ ಕುರಿತ ಪ್ರಮುಖ ಮಾಹಿತಿ:

    ### ನಿಧನ ಮತ್ತು ಆರೋಗ್ಯ ಸಮಸ್ಯೆ * **ದಿನಾಂಕ:** 2025ರ ಮೇ 26ರಂದು ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ನಿಧನರಾದರು. * **ಕಾರಣ:** ದೀರ್ಘಕಾಲದ ಅನಾರೋಗ್ಯ, ಆರ್ಥಿಕ ಸಂಕಷ್ಟ ಹಾಗೂ ಪೌಷ್ಟಿಕಾಂಶದ ಕೊರತೆಯಿಂದಾಗಿ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸಿತ್ತು. * **ಪರಿಸ್ಥಿತಿ:** ಕೋವಿಡ್ ಸಮಯದಲ್ಲಿ ಕೆಲಸವಿಲ್ಲದೆ, ಸೂಕ್ತ ಆಹಾರವಿಲ್ಲದೆ ವಿಟಮಿನ್ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿದ್ದ ಅವರು, ಕೊನೆಯ ದಿನಗಳಲ್ಲಿ ಗುರುತೇ ಸಿಗದಷ್ಟು ತೆಳ್ಳಗಾಗಿದ್ದರು. ### ಜೀವನ ಮತ್ತು ವೃತ್ತಿಜೀವನ (Life History) * **ರಂಗಭೂಮಿ ಹಿನ್ನೆಲೆ:** ಶ್ರೀಧರ್ ನಾಯಕ್ ಅವರು ಮೂಲತಃ ರಂಗಭೂಮಿ…

    Read More »
  • Uncategorized

    ಎರಡು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಗುರುವಾರ ಬೆಳಿಗ್ಗೆ ಉಪಾಹಾರ ಸೇವಿಸಿದ 80ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

    ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಎರಡು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಗುರುವಾರ ಬೆಳಿಗ್ಗೆ ಉಪಾಹಾರ ಸೇವಿಸಿದ 80ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬಹುದಿನಗಳಿಂದ ಶೇಖರಿಸಿದ್ದ ಅವಲಕ್ಕಿಯಿಂದ ಮಾಡಿದ ಉಪಾಹಾರ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಉಪಾಹಾರ ಸೇವಿಸಿದ ಬಳಿಕ ‌ವಿದ್ಯಾರ್ಥಿಗಳಲ್ಲಿ ವಾಂತಿ, ಹೊಟ್ಟೆನೋವು ಹಾಗೂ ಅಸ್ವಸ್ಥತೆ ಕಾಣಿಸಿ ಕೊಂಡಿದೆ. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ 31 ವಿದ್ಯಾರ್ಥಿಗಳನ್ನು ಅಫಜಲಪುರ…

    Read More »
  • Uncategorized

    15 ಕೆಜಿ ಚಿನ್ನ, 20 ಕೋಟಿ ನಗದು : ಸರ್ಕಾರಿ ಬಸ್ ಚಾಲಕನ ಮನೆಯಲ್ಲಿದ್ದ ‘ಖಜಾನೆ’ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

    ಕೋಲ್ಕತ್ತಾ: ದೇಶದಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಬಯಲಾದಾಗಲೆಲ್ಲಾ ಜನರು “ಇಷ್ಟೊಂದು ಕಪ್ಪು ಹಣವೇ!” ಎಂದು ಆಶ್ಚರ್ಯಪಡುವುದು ಸಾಮಾನ್ಯ. ಆದರೆ, ಭ್ರಷ್ಟರ ಕೈಚಳಕ ಮಾತ್ರ ದಿನದಿಂದ ದಿನಕ್ಕೆ ಗಡಿ ದಾಟುತ್ತಿದೆ. ಇಂತಹದ್ದೇ ಒಂದು ಘಟನೆ ಪಶ್ಚಿಮ ಬಂಗಾಳದ ಬೀರ್‌ಭೂಮ್‌ನಲ್ಲಿ ಬೆಳಕಿಗೆ ಬಂದಿದ್ದು, ಕೇವಲ ಒಬ್ಬ ಸಾಮಾನ್ಯ ಬಸ್ ಚಾಲಕನ ಮನೆಯಲ್ಲಿ ಸಿಕ್ಕ ಸಂಪತ್ತು ಕಂಡು ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ. ಪೊಲೀಸರು ಈ ಬೃಹತ್ ಪ್ರಮಾಣದ ಕಪ್ಪು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲು 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳು, 5 ನೋಟು ಎಣಿಕೆ ಯಂತ್ರಗಳು ಹಾಗೂ ಹಲವು ಗಂಟೆಗಳ…

    Read More »
  • Uncategorized

    ಬೆಳಗಾವಿ: ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನ ನೂತನ ಸದಸ್ಯರಿಗೆ ಅಭಿನಂದನೆ; ವಕೀಲರ ಪರಿಹಾರ ಧನ ಹೆಚ್ಚಳಕ್ಕೆ ಜಿ. ಬಿ. ಗಂಗಾಯಿ ಆಗ್ರಹ

    ಬೆಳಗಾವಿ: ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನ ನೂತನ ಸದಸ್ಯರಿಗೆ ಅಭಿನಂದನೆ; ವಕೀಲರ ಪರಿಹಾರ ಧನ ಹೆಚ್ಚಳಕ್ಕೆ ಜಿ. ಬಿ. ಗಂಗಾಯಿ ಆಗ್ರಹ ಬೆಳಗಾವಿಯ ಹೊಸ ಕೋರ್ಟ್ ಸಂಕೀರ್ಣದಲ್ಲಿ ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ನೂತನ ಬಾರ್ ಕೌನ್ಸಿಲ್ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬಿ. ಜೆ. ಗಂಗಾಯಿ ಅವರು, ವಕೀಲರ ಹಿತರಕ್ಷಣೆ ಹಾಗೂ ಸೌಲಭ್ಯಗಳ ಹೆಚ್ಚಳಕ್ಕಾಗಿ ಬಾರ್ ಕೌನ್ಸಿಲ್ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಲವಾಗಿ ಆಗ್ರಹಿಸಿದರು. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ಗೆ ನೂತನವಾಗಿ ಆಯ್ಕೆಯಾದ…

    Read More »
  • Uncategorized

    ಸರ್ವೋದಯ ಶಾಲೆಯಲ್ಲಿ ‘ಮಳೆ ನೀರು ಹಿಡಿಯಿರಿ’ ಅಭಿಯಾನ; ವಿದ್ಯಾರ್ಥಿಗಳೊಂದಿಗೆ ಪ್ರತಿಜ್ಞೆ ಸ್ವೀಕರಿಸಿದ ಅಧಿಕಾರಿಗಳು!

    ಖಾನಾಪುರ: ಸರ್ವೋದಯ ಶಾಲೆಯಲ್ಲಿ ‘ಮಳೆ ನೀರು ಹಿಡಿಯಿರಿ’ ಅಭಿಯಾನ; ವಿದ್ಯಾರ್ಥಿಗಳೊಂದಿಗೆ ಪ್ರತಿಜ್ಞೆ ಸ್ವೀಕರಿಸಿದ ಅಧಿಕಾರಿಗಳು! ಖಾನಾಪುರ ಪಟ್ಟಣ ಪಂಚಾಯಿತಿ ವತಿಯಿಂದ ಸ್ಥಳೀಯ ಸರ್ವೋದಯ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ‘ಮಳೆಗಾಲದಲ್ಲಿ ಮಳೆ ನೀರು ಹಿಡಿಯಿರಿ’ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಧಿಕಾರಿಗಳು ಶಾಲಾ ಮಕ್ಕಳೊಂದಿಗೆ ಸೇರಿ ಮಳೆ ನೀರು ಸಂರಕ್ಷಣೆಯ ಮಹತ್ವದ ಪ್ರತಿಜ್ಞಾವಚನ ಸ್ವೀಕರಿಸಿದರು. ಪ್ರತಿಯೊಂದು ಮನೆ, ಸಮಾಜ ಹಾಗೂ ಕೆಲಸದ ಸ್ಥಳಗಳಲ್ಲಿ ಮಳೆ ನೀರು ಕೊಯ್ಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ನೀರಿನ ಸಂರಕ್ಷಣೆ ಮತ್ತು ಜಲ ಸಂಪನ್ಮೂಲಗಳ ರಕ್ಷಣೆಯ ಉದ್ದೇಶದಿಂದ ಖಾನಾಪುರ…

    Read More »
  • Uncategorized

    ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಗಡಿಭಾಗದಲ್ಲಿರುವ ಕೃಷ್ಣಾ ,ದೂಧಗಂಗಾ,ವೇದಗಂಗಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ

    ಚಿಕ್ಕೋಡಿ:ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಗಡಿಭಾಗದಲ್ಲಿರುವ ಕೃಷ್ಣಾ ,ದೂಧಗಂಗಾ,ವೇದಗಂಗಾ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಕಳೆದ ಕೆಲವು ಗಂಟೆಗಳಲ್ಲಿ ನದಿಯ ನೀರು ಸುಮಾರು 2 ಅಡಿಯಷ್ಟು ಹೆಚ್ಚಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಮಹಾರಾಷ್ಟ್ರದ ನದಿಗಳಿಂದ ಕೃಷ್ಣಾ ನದಿಗೆ ಸುಮಾರು 87,000 ಕ್ಯೂಸೆಕ ನೀರು ಹರಿದು ಬರುತ್ತಿದೆ. ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯ ಒಳ ಹರಿವು ಹೆಚ್ಚಾಗುತ್ತಿದೆ.ನದಿ ತೀರದ ಕೆಳಮಟ್ಟದ ಎಲ್ಲ ಸೇತುವೆಗಳು…

    Read More »
  • Uncategorized

    ಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್

    ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ  ಸಸ್ಪೆಂಡ್  ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ  ಅಮಾನತು ಆದೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ ಮೋಜು ಮಸ್ತಿ ಮಾಡಿದ ಬಗ್ಗೆ ಹಲವು ಮಾಧ್ಯಮಗಳಲ್ಲಿ ದೃಶ್ಯ ಸಹಿತ ವರದಿ ಪ್ರಸಾರವಾಗಿದ್ದ…

    Read More »
  • Uncategorized

    ಪಡಿತರ ಅಕ್ಕಿ ಮಾರಾಟ–ಖರೀದಿಗೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

    ಕಾರವಾರ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರು ಹಾಗೂ ಖರೀದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 15,819 ಅಂತ್ಯೋದಯ ಅನ್ನ ಯೋಜನೆ (AAY) ಹಾಗೂ 2,88,920 ಆದ್ಯತಾ ಪಡಿತರ ಚೀಟಿಗಳು ಸೇರಿದಂತೆ ಒಟ್ಟು 3,04,739 ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ–2013ರಡಿ ಪಡಿತರ ಅಕ್ಕಿ ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು 35…

    Read More »
  • Uncategorized

    ಭಟ್ಕಳದ ಯೋಗಗುರು ಗೋವಿಂದ ದೇವಾಡಿಗರಿಗೆ ‘ಭಾರತೀಯ ಯೋಗ ರತ್ನ-2026’ ಪ್ರಶಸ್ತಿ

    ಭಟ್ಕಳ: ತಾಲೂಕಿನ ಯೋಗ ಶಿಕ್ಷಕರಾಗಿರುವ ಹಾಗೂ ಯೋಗ ಇನ್‌ಸ್ಟಿಟ್ಯೂಟ್‌ನ ತಾಲೂಕು ಉಸ್ತುವಾರಿಯಾದ ಗೋವಿಂದ ಎನ್. ದೇವಾಡಿಗ (ಗೋವಿಂದ ಗುರೂಜಿ) ಅವರಿಗೆ ಯೋಗ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ‘ಭಾರತೀಯ ಯೋಗ ರತ್ನ-2026’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಭಾರತ ಸರ್ಕಾರದ ನೀತಿ ಆಯೋಗದಡಿ ನೋಂದಾಯಿತ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ ಸಂಸ್ಥೆಯು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆಯೋಜಿಸಿದ್ದ ಭಾರತೀಯ ಯೋಗ ಎಕ್ಸಲೆನ್ಸ್ ಅವಾರ್ಡ್ಸ್-2026 ಕಾರ್ಯಕ್ರಮದಲ್ಲಿ ಈ ಗೌರವವನ್ನು ನೀಡಿ ಸನ್ಮಾನಿಸಿದೆ. ಯೋಗ, ಸಾವಧಾನತೆ (Mindfulness), ಸಮಗ್ರ ಆರೋಗ್ಯ…

    Read More »
  • Uncategorized

    ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ; ಪರಾರಿಯಾಗಿದ್ದ ಮೂವರು ಆರೋಪಿಗಳ ಬಂಧನ, ನ್ಯಾಯಾಂಗ ಬಂಧನಕ್ಕೆ ಆದೇಶ

    ದಾಂಡೇಲಿ: ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಎನ್. ರಸ್ತೆಯಲ್ಲಿರುವ ಹನುಮಾನ್ ಬಾರ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಜುಲೈ 27ರಂದು ಸಂಜೆ 6.15ರ ಸುಮಾರಿಗೆ ಆರೋಪಿಗಳಾದ ಅಶೋಕ ದೇಮಣ್ಣ ಗುರವ, ಪೈರೋಜ್ ತಂದೆ ಅಬ್ದುಲ್ ಸತ್ತಾರ್ ದವಲತ್ತಿ ಹಾಗೂ ಆಸೀಪ್ @ ಅಕ್ಷರ ಫಕ್ರುದ್ದೀನ್ ನರಗುಂದ, ಮೂವರೂ ಮಾರುತಿ ನಗರ, ದಾಂಡೇಲಿ ನಿವಾಸಿಗಳಾಗಿದ್ದು, ಒಟ್ಟಾಗಿ ಬಂದು ಹನುಮಾನ್ ಬಾರ್‌ನಲ್ಲಿ ಪಿರ್ಯಾದಿದಾರರಿಗೆ…

    Read More »
Back to top button