ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ. ಅಧಿಕಾರಕ್ಕೆ ಬಂದಾಗೆಲ್ಲ ಪಿಎಫ್ಐ, ಎಸ್ಡಿಪಿಐ ಮೇಲಿನ ಕೇಸ್ಗಳನ್ನ ಹಿಂಪಡೆದ ಹಿನ್ನೆಲೆ ಕೆಲವರಿಗೆ ಶಕ್ತಿ ಬಂದಿದೆ. ಹೀಗಾಗಿ ಹಸು ಕೆಚ್ಚಲು ಕೊಯ್ಯುವ ಮಟ್ಟಕ್ಕೆ ಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕ್ರಿಮಿನಲ್ಗಳಿಗೆ ಧೈರ್ಯ ಬಂದಿದೆ. ಏನಾದರೂ ಆದ್ರೆ ರಕ್ಷಿಸಿಸುತ್ತಾರೆ ಅನ್ನೋ ಧೈರ್ಯ ಹುಟ್ಟಿಕೊಂಡಿದೆ. ಪರಿಣಾಮ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಸರ್ಕಾರ ಗಟ್ಟಿಯಾಗಿದ್ರೆ, ಈ ರೀತಿಯ ಘಟನೆಗಳು ನಡೆಯೋದಿಲ್ಲ. ಸರ್ಕಾರದ ಸಂಪೂರ್ಣ ವೈಫಲ್ಯ ಆಗಿದೆ. ಅಮಾಯಕ ಹಸುಗಳ ಮೇಲೆ ಈ ರೀತಿ ಮಾಡುತ್ತಿದ್ದಾರೆ. ಇದರ ಬಗ್ಗೆ ಹೋರಾಟ ಮಾಡಿದ್ರೆ ಇದು ರಾಜಕೀಯ ಪ್ರೇರಿತ ಅಂತ ಸಿಎಂ ಅಸಡ್ಡೆಯಿಂದ ಮಾತನಾಡುತ್ತಾರೆ. ಹೀಗಾದ್ರೆ ಜನರ ಬದುಕು ಹೇಗೆ ಅನ್ನೋದನ್ನ ವಿಚಾರ ಮಾಡಬೇಕು. ಎಲ್ಲಾ ಕ್ರಿಮಿನಲ್ಗಳಿಗೆ ಕಾಂಗ್ರೆಸ್ ಸರ್ಕಾರ ಸ್ವರ್ಗ ಆಗಿದೆ ಎಂದು ಹೀಗಳೆದರು.