Uncategorized

ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ: ಕೃಷ್ಣ ಬೈರೇಗೌಡ

ಬೆಂಗಳೂರು: ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸಹ ಸರಿಯಾದ ದಾಖಲೆ ಇಲ್ಲದವರಿಗೆ ಜಮೀನಿನ ಮಾಲೀಕತ್ವದ ಗ್ಯಾರಂಟಿ ನೀಡುವ ಸಲುವಾಗಿ ದರ್ಖಾಸ್ತು ಪೋಡಿ ಕಾರ್ಯಕ್ರಮವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅಂಕಿತ ಹಾಕಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಆರ್ಟಿಸಿ, ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ “ನನ್ನ ಭೂಮಿ” ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಮೂರು ವರ್ಷದಲ್ಲಿ 5 ಸಾವಿರ ಜನರಿಗೆ ಪೋಡಿ ಮಾಡಿಕೊಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರದ ಕಳೆದ ಎರಡು ತಿಂಗಳಲ್ಲಿ 5 ಸಾವಿರ ಜನರಿಗೆ ಪೋಡಿ ದುರಸ್ಥಿ ಮಾಡಲಾಗಿದೆ. ನಮ್ಮ ಗುರಿ ದೊಡ್ಡದಿದೆ. ಕನಿಷ್ಟ 5 ರಿಂದ 7 ಲಕ್ಷ ಕುಟುಂಬಗಳಿಗೆ ಪೋಡಿ ದುರಸ್ಥಿಗೊಳಿಸಬೇಕು ಎಂಬುದು ನಮ್ಮ ಗುರಿಯಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಅಭಿಯಾನ ಮಾದರಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button