ಬೆಂಗಳೂರು

ಬೈಕ್ ವ್ಹೀಲಿಂಗ್ ಮಾಡುವ ವೇಳೆ ಕ್ಯಾಂಟರ್ಗೆ ಡಿಕ್ಕಿ ; ಯುವಕರಿಬ್ಬರು ಸ್ಥಳದಲ್ಲೆ ಸಾವು..

ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು.

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್​ ವ್ಹೀಲಿಂಗ್​ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದು ತೀವ್ರ ರಕ್ತಸ್ರಾವವಾಗಿ ಇಬ್ಬರೂ ಮೃತಪಟ್ಟಿದ್ದಾರೆ.

ಅಪಘಾತ ತಪ್ಪಿಸಲು ಪ್ರಯತ್ನಿಸಿದ ಕ್ಯಾಂಟರ್ ಚಾಲಕ, ತಕ್ಷಣ ಕ್ಯಾಂಟರ್ ಅನ್ನು ರಸ್ತೆ ಬದಿಗೆ ಎಳೆದಿದ್ದಾರೆ. ಅದೃಷ್ಟವಶಾತ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯದೇ ಸ್ವಲ್ಪದರಲ್ಲೇ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಸಾಗಿಸಿದರು.

Related Articles

Leave a Reply

Your email address will not be published. Required fields are marked *

Back to top button