ರಾಜಕೀಯರಾಜ್ಯ

ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ:C.M.

ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ…ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ; ಸಿ.ಎಂ.ಸಿದ್ದರಾಮಯ್ಯ ಸವಾಲು

ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ
ಅವರ ಆರೋಪ ಸಾಬೀತು ಮಾಡಿದ್ರೆ
ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ
ಸಿ.ಎಂ.ಸಿದ್ದರಾಮಯ್ಯ ಸವಾಲು

ಪಿಎಂ ಮೋದಿ ತಮ್ಮ ಭಾಷಣದಲ್ಲಿ ಪದೇ ಪದೇ ಸುಳ್ಳು ಹೋಗ್ತಾರೆ. ಕರ್ನಾಟಕ ಸರ್ಕಾರದ ವಿರುದ್ಧ ಅವರು ಮಾಡಿದ ಆರೋಪ ಸಾಬೀತಾದ್ರೇ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ. ಆದರೇ ಮೋದಿ ನನ್ನ ಸವಾಲನ್ನು ಯಾಕೆ ಸ್ವೀಕರಿಸುತ್ತಿಲ್ಲ? ಅವರಿಗೇನು ಭಯ ಎಂದು ಸಿಎಂ ಸಿದ್ಧರಾಮಯ್ಯ ಮಹಾರಾಷ್ಟ್ರದಲ್ಲಿ ಪ್ರಶ್ನಿಸಿದ್ದಾರೆ.

ಇಂದು ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯ ಕೈಗೊಂಡು ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಹಲವಾರು ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ. ಸುಳ್ಳಾದ್ರೆ ನಾನು ರಾಜಕೀಯ ನಿವೃತ್ತಿ ತಗೊತೀನಿ. ನಿಜ ಆಗಿದ್ರೆ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ? ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು.

ನಮ್ಮ ಸರ್ಕಾರದ ವಿರುದ್ಧ ಪುಟಗಟ್ಟಲೆ ಸುಳ್ಳು ಜಾಹಿರಾತು ನೀಡಿರುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ. ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿಯಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ, ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ. ಅದೇ ಮಹಾರಾಷ್ಟ್ರ ರಾಜ್ಯ ಪ್ರತೀ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ಮಾತ್ರ. ಹೀಗಾಗಿ ಮಹಾರಾಷ್ಟ್ರ ಕಟ್ಟುವ ಪ್ರತೀ ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ. ಕೇಂದ್ರದ ಮೋದಿ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು. ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ? ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರೂ ನಮ್ಮ ಗ್ಯಾರಂಟಿಗಳ ಅನುಕೂಲ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ರಾಜ್ಯ. ಆದ್ದರಿಂದ ಇಲ್ಲಿ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಾರೆ. ಅನುಮಾನ ಬೇಡ ಎಂದರು.

Related Articles

Leave a Reply

Your email address will not be published. Required fields are marked *

Back to top button