ಧಾರವಾಡ
ಹಾಸ್ಟೆಲ್ಗಳಲ್ಲಿ ಹೊರಗುತ್ತಿಗೆ ಏಜೆನ್ಸಿ ರದ್ದುಗೊಳಿಸಲು ಆಗ್ರಹ*

ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಯುಟಿಸಿಯು ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ಗಳಲ್ಲಿ ಹೊರಗುತ್ತಿಗೆ ಏಜೆನ್ಸಿಯನ್ನು ರದ್ದು ಮಾಡಬೇಕು. ಬೀದರ್ ಸೊಸೈಟಿ ಮಾದರಿಯಲ್ಲಿ ಹಾಸ್ಟೆಲ್ ಗುತ್ತಿಗೆ ಕಾರ್ಮಿಕರ ನೇಮಕಾತಿ ಆಗಬೇಕು. ವೇತನ, ಪಿಎಫ್, ಇಎಸ್ಐ ಪಾವತಿಯಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಬೇಕು, ರಜೆ ಹಾಗೂ 8 ಗಂಟೆ ಕೆಲಸ ಸೇರಿದಂತೆ ಶಾಸನಬದ್ಧ ಹಕ್ಕುಗಳನ್ನು ಜಾರಿಗೆ ತರಬೇಕು, ಈ ಎಲ್ಲ ಕುಂದು, ಕೊರತೆ ನಿವಾರಣೆಗೆ ಜಿಲ್ಲಾ ಪಂಚಾಯ್ತಿ ಸಿಇಓ ನೇತೃತ್ವದಲ್ಲಿ ಸಭೆ ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.