ಬೆಂಗಳೂರುರಾಜಕೀಯರಾಜ್ಯ

ಮಹಿಳಾ ಪ್ರಯಾಣಿಕರೊಡನೆ ಕೆಟ್ಟದಾಗಿ ವರ್ತಿಸಿದ

ಬೆಂಗಳೂರು: ಗುರುವಾರದಂದು ಮಂಗಳೂರು ವಿಭಾಗದ ಕೆಎಸ್ಸಾರ್ಟಿಸಿ ಬಸ್‍ನಲ್ಲಿ ನಿರ್ವಾಹಕರೊಬ್ಬರು ಮಹಿಳಾ ಪ್ರಯಾಣಿಕರೊಡನೆ ಕೆಟ್ಟದಾಗಿ ವರ್ತಿಸಿದ್ದು, ನಿರ್ವಾಹಕನ್ನು ಸೇವೆಯಿಂದ ವಜಾ ಮಾಡಲಕ್ರಮ ವಹಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಕೆಎಸ್ಸಾರ್ಟಿಸಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನ

ಈ ಹಿನ್ನಲೆಯಲ್ಲಿ ಬಾಗಲಕೋಟೆ ಮೂಲದ ಬಸ್ ನಿರ್ವಾಹಕ ಪ್ರದೀಪ್ ಎಂಬಾತನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದರು. ಬುಧವಾರ ಮುಡಿಪುವಿನಿಂದ ಮಂಗಳೂರಿಗೆ ಈ ಸರಕಾರಿ ಬಸ್ ಸಂಚರಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಬಸ್ ನಿರ್ವಾಹಕ ಪ್ರದೀಪ್ ಪ್ರಯಾಣದ ವೇಳೆ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳನ್ನು ಖಾಸಗಿ ಭಾಗವನ್ನು ಸ್ಪರ್ಶಿಸಲು ಯತ್ನಿಸಿದ್ದು, ಈ ಸಂದರ್ಭಸಹ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಸೆರೆ ಹಿಡಿದಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು.

ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿರ್ವಾಹಕನನ್ನು ಅಮಾನತ್ತು ಮಾಡಲಾಗಿದೆ. ಆದರೆ ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿ ಹೆಣ್ಣುಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧವಾಗಿದೆ ಎಂದು ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button