Uncategorized

30 ಪ್ರಯಾಣಿಕರ ಪ್ರಾಣ ಉಳಿಸಿದ KSRTC ಬಸ್​ ಚಾಲಕ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನ ಟೈರ್ ಸ್ಫೋಟಗೊಂಡು, ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಗುದ್ದಿದ ಘಟನೆ ಮೆಣಸಿಗೇಟ್​ ಬಳಿ ನಡೆದಿದೆ. ಅದೃಷ್ಟವಶಾತ್​ ಚಾಲಕನ ಸಮಯಪ್ರಜ್ಞೆಯಿಂದಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಘಟನೆ ನಡೆದಿದೆ. ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಬಸ್​ನ ಟೈರ್ ಸ್ಪೋಟಗೊಂಡಿದೆ.

ಈ ವೇಳೆ ಚಾಲಕ ಮುನಿಶ್ಯಾಮಪ್ಪ ಸಮಯಪ್ರಜ್ಞೆಯಿಂದ ತಕ್ಷಣವೇ ಬಸ್ಸನ್ನು ತಡೆಗೋಡೆಯ ಕಡೆಗೆ ಚಲಾಯಿಸಿದ್ದಾರೆ. ತಡೆಗೋಡೆಯಿಂದಾಗಿ ಬಸ್​ ನಿಯಂತ್ರಣಕ್ಕೆ ಬಂದಿದೆ. ತಡೆಗೋಡೆ ಇಲ್ಲದಿದ್ದಲ್ಲಿ ಹೆಚ್ಚಿನ ಅನಾಹುತವಾಗುವ ಸಾಧ್ಯತೆ ಇತ್ತು. ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button