ಧಾರವಾಡರಾಜಕೀಯರಾಜ್ಯಹುಬ್ಬಳ್ಳಿ

ಕಾಂಗ್ರೆಸ್ ಆಡಳಿತ ಬಂದರೆ ಬರಗಾಲ‌; ವಿಪಕ್ಷದವರ ಟೀಕೆ;ಅವಧಿಗೆ ಮುನ್ನವೇ ಸಪದ್ಭರಿತ ಮಳೆಯಾಗುತ್ತಿದೆ- ಚೆಲುವರಾಯಸ್ವಾಮಿ‌ ಟಾಂಗ್

 ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಬೀಳುತ್ತೆ ಎಂದು ಬಿಜೆಪಿ-ಜೆಡಿಎಸ್‌ನವರು ಹೇಳಿದ್ದರು. ಆದರೆ, ಕಳೆದ ಬಾರಿ ನಮ್ಮ ರಾಜ್ಯದಲ್ಲಿ 1.48 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿದೆ. ಈಗ ಅವಧಿಗೂ ಮುನ್ನವೇ ಸಪದ್ಭರಿತವಾಗಿ ಮಳೆಯಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ವಿಪಕ್ಷಗಳ ಟೀಕೆಗೆ ಟಾಂಗ್ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಾವು ಕೃಷಿ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದೇವೆ. 1.48 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗಿದ್ದು ದೇಶದಲ್ಲೇ ಹೆಚ್ಚಿನ ಉತ್ಪಾದನೆಯಾಗಿದೆ. ಈಗ ಮುಂಗಾರು ಹಂಗಾಮಿಗೆ ಎಲ್ಲ ರೀತಿಯಿಂದ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಮೇ ತಿಂಗಳ ನಂತರ ಎಲ್ಲ ಕಡೆ ಬಿತ್ತನೆ ಕಾರ್ಯ ಆರಂಭವಾಗಲಿದೆ. ನಮ್ಮ ಇಲಾಖೆ ಈಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ರೈತರಿಗೆ ಎಲ್ಲ ರೀತಿಯ ಸಹಕಾರ ಕೊಡಲು ನಾವು ಸಿದ್ಧರಿದ್ದೇವೆ. ಇದಕ್ಕಾಗಿಯೇ ಬೆಳಗಾವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದೇನೆ. ಏಳು ಜಿಲ್ಲೆಗಳ ಸಭೆ ಇಂದು ನಡೆಯಲಿದೆ ಎಂದರು. ಜತೆಗರ ಕೃಷಿ ಪರಿಕರಗಳ ಸಬ್ಸಿಡಿ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾವುದೇ ಸಬ್ಸಿಡಿ ಕಡಿಮೆಯಾಗಿಲ್ಲ. ಕೆಲವೊಂದು ಬೆಲೆ ಜಾಸ್ತಿ ಆಗಿದೆ. ಹೀಗಾಗಿ ರೈತರು ಸಬ್ಸಿಡಿ ಜಾಸ್ತಿ ಎಂದು ಹೇಳುತ್ತಿದ್ದಾರೆ. ಎಲ್ಲರಿಗೂ ಸಬ್ಸಿಡಿ ಕೊಡುತ್ತಿದ್ದೇವೆ. ಸ್ವಲ್ಪ ಸಬ್ಸಿಡಿ ಹೆಚ್ಚಿಗೆ ಮಾಡಿ ಎಂದು ಕೇಳುತ್ತಿದ್ದಾರೆ. ಎಲ್ಲಿ ಹೆಚ್ಚಿನ ಬೇಡಿಕೆ ಇದೆಯೋ ಅಲ್ಲಿ ಸಬ್ಸಿಡಿ ಹೆಚ್ಚಿಗೆ ಮಾಡುತ್ತೇವೆ ಎಂದರು.

 

Related Articles

Leave a Reply

Your email address will not be published. Required fields are marked *

Back to top button