Uncategorized
ಬೆಲ್ಲದ ಬಾಗೇವಾಡಿಯಲ್ಲಿ ಎಂ.ಕಾಂ ಕೋರ್ಸ್ ಆರಂಭ- ಪವನ್ ಕತ್ತಿ

ಹುಕ್ಕೇರಿ: ‘ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ಮಹಾಂತೇಶ್ವರ ವಿದ್ಯಾ ಟ್ರಸ್ಟ್ನ ವಿಶ್ವನಾಥ ಕತ್ತಿ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪ್ರಸ್ತಕ ಸಾಲಿನಿಂದ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅನುಮತಿ ಪಡೆದು ಮಾಸ್ಟರ್ ಆಫ್ ಕಾಮರ್ಸ್ (ಎಂ.ಕಾಂ) ಕೋರ್ಸ್ಗೆ ಪ್ರವೇಶ ಆರಂಭಿಸಲಾಗಿದೆ’ ಎಂದು ಸಂಸ್ಥೆಯ ಮಾರ್ಗದರ್ಶಕ ಪವನ್ ಕತ್ತಿ ತಿಳಿಸಿದರು.
‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲಾಗದೇ ಬೇರೆ ಕಡೆ ಹೋಗಬೇಕಾಗುತ್ತದೆ. ಕೆಲವರಿಗೆ ವೆಚ್ಚ ಭರಿಸಲು ಆಗುವುದಿಲ್ಲ. ಹಾಗಾಗಿ ಇಲ್ಲಿಯೇ ಕೋರ್ಸ್ ಆರಂಭಿಸಲಾಗಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಸಂಸ್ಥೆಯ ಆಡಳಿತಾಧಿಕಾರಿ ಕೆ.ಸಿ.ಮುಚಖಂಡಿ, ಪ್ರಾಚಾರ್ಯ ವಿ.ಎಸ್. ಹೂಗಾರ, ಪಿಯು ಕಾಲೇಜಿನ ಪ್ರಾಚಾರ್ಯ ಎಸ್. ಎಂ.ಭಂಗಿ, ಯು.ಕೆ. ಪಾಟೀಲ ಇದ್ದರು.