ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಹುಕ್ಕೇರಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ ಗ್ರಾಮದ ಶ್ರೀ ಬಡಕುಂದ್ರಿ ಲಕ್ಷ್ಮೀ (ಹೋಳೆಮ್ಮ) ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಲಕ್ಕಪ್ಪ ಪೂಜೇರಿ,ಬಾಬುಗೌಡ ಪಾಟೀಲ,ಸಿದ್ದು ಮಾನಗಾಂವಿ, ಎಚ್ ಎಲ್ ಪೂಜೇರಿ, ಅಡಿವೆಪ್ಪ ಪೂಜೇರಿ, ಬಾಳಪ್ಪ ಪೂಜೆರಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.