ಸಿಎಂ ಸಿದ್ದರಾಮಯ್ಯ ಸಂಪುಟದ 7 ಸಚಿವರಿಗೆ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಇಂದ ಹೊಯಿತು ಪತ್ರ…!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಂಪುಟದ 7 ಸಚಿವರಿಗೆ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಪತ್ರ ಬರೆದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಹೆಚ್ ಸಿ ಮಹದೇವಪ್ಪ, ಜಮೀರ್ ಅಹ್ಮದ್, ಬೋಸರಾಜು, ದಿನೇಶ್ ಗುಂಡೂರಾವ್ ಮತ್ತು ರಹೀಂ ಖಾನ್ ಅವರಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ. ಪತ್ರದಲ್ಲಿ ಸಚಿವರ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.
ಗುತ್ತಿಗೆದಾರರ ಸಂಘ, ಗುತ್ತಿಗೆದಾರರ ಕುಂದು ಕೊರತೆಗಳ ಬಗ್ಗೆ ಹಾಗೂ ಗುತ್ತಿಗೆದಾರರ ಬಾಕಿ ಬಗ್ಗೆ ಸುಮಾರು ಬಾರಿ ತಮ್ಮ ಗಮನಕ್ಕೆ ತಂದಿರುತ್ತೇವೆ ಆದರೆ ತಾವುಗಳು ಇದುವರೆವಿಗೂ ನಮಗೆ ಯಾವುದೇ ಪತ್ರ ಸಹ ಬರೆದಿರುವುದಿಲ್ಲ. ಹೀಗಾಗಿ ಸಭೆ ಕರೆದು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕು ಎಂದು ಪತ್ರದಲ್ಲಿ ಉಲೇಖಿಸಲಾಗಿದೆ.
ಹಣ ಪಾವತಿಸುವ ವಿಷಯದಲ್ಲಿ ಸಚಿವರು ಕೊಟ್ಟ ಪಟ್ಟಿಯ ಪ್ರಕಾರ ಜೇಷ್ಠತೆಯನ್ನು ಕಡೆಗಣಿಸಿ ಹಣ ಪಾವತಿಸಲು ಸೂಚಿಸಿರುತ್ತಾರೆ. ಈ ತರಹ ಮಾಡಿದರೆ ನಮ್ಮ ಎಲ್ಲಾ ಗುತ್ತಿಗೆದಾರರಿಗೂ ಅನ್ಯಾಯ ಮಾಡಿದಂತಾಗುತ್ತದೆ. ನಾವು ಈ ಹಿಂದಿನ ಸರ್ಕಾರದ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ತಮಗೆ ತಿಳಿದಿದೆ, ಆದ್ದರಿಂದ ತಮಗೆ ನಮ್ಮ ಸಂಘದ ಬಗ್ಗೆ ಸ್ವಲ್ಪವು ಕರುಣೆ ಇಲ್ಲ ಎಂದು ಅನಿಸುತ್ತದೆ, ಈ ರೀತಿ ನಮ್ಮನ್ನು ಕಡೆಗಣಿಸುತ್ತೀರಿ ಎಂದು ನಾವು ಕನಸಿನಲ್ಲು ಭಾವಿಸಿರುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಅಲ್ಲದೆ ನಮ್ಮ ಪತ್ರ ತಲುಪಿ 7 ದಿನದೊಳಗೆ ನಮ್ಮ ಸಂಘದ ಸಭೆ ಕರೆದು ನಮಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಈ ವಿಷಯವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾಗುತ್ತೆ ಹಾಗೂ ಮುಂದೆ ಹೋರಾಟದ ಹಾದಿ ಹಿಡಿಯಲು ನಿವೇ ಅನುಮತಿ ಮಾಡಿಕೊಟ್ಟಂತಾಗುವುದು ಎಂದು ಎಚ್ಚರಿಕೆ ನಿಡಿದ್ದಾರೆ.
.