ಬೆಳಗಾವಿ

ಅಪಹರಣಕಾರರ ಕಾಲಿಗೆ ಗುಂಡು ಹೊಡೆದ ಪೊಲೀಸರು

ಬೆಳಗಾವಿ: ಅಪಹರಣಕಾರರ ಕಾಲಿಗೆ ಗುಂಡು ಹೊಡೆದ ಪೊಲೀಸರು ಮಕ್ಕಳನ್ನು ರಕ್ಷಿಸಿದ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಗಬಾಳಿ ರಸ್ತೆಯ ಬಳಿ ಶುಕ್ರವಾರ (ಅ.25) ಬೆಳಗ್ಗೆ ನಡೆದಿದೆ.

ಪೊಲೀಸರು ಮೂವರು ಅಪಹರಣಕಾರರನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ರವಿಕಿರಣ, ಬಿಹಾರ ಮೂಲದ ಶಾರುಖ್ ಶೇಖ್ ಮತ್ತು ಕೊಲ್ಲಾಪುರ ಜಿಲ್ಲೆಯ ಸಂಬಾ ಕಾಂಬಳೆ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

 

ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ವಿಜಯ ದೇಸಾಯಿ ಎಂಬುವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ನಾಲ್ಕು ಮತ್ತು ಮೂರು ವರ್ಷದ ಮಕ್ಕಳನ್ನು ಅಪಹರಿಸಿ ಪರಾರಿಯಾಗಿದ್ದರು.

ವಿಷಯ ತಿಳಿದ ಅಥಣಿ ಪೊಲೀಸರು ಮೂರು ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಮಹಾರಾಷ್ಟ್ರದ ಗಡಿ ಕೋಹಳ್ಳಿ ಸಿಂಧೂರ ಬಳಿ ಪೊಲೀಸರು ಅಪಹರಣಕಾರರನ್ನು ತಡೆಗಟ್ಟಿದ್ದಾರೆ.

ಆಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಆತ್ಮರಕ್ಷಣೆಗೆ ಗುಂಡು ಹಾರಿಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button