ಬೆಳಗಾವಿ
ಇತ್ತ ಮಳೆ ಭಾರಿ, ಅತ್ತ ಬೀಜಗಳೂ ದುಬಾರಿ

ಬೆಳಗಾವಿ: ಅಕಾಲಿಕ ಮಳೆ ಹಿಂಗಾರಿ ಹಂಗಾಮಿಗೆ ಸಿದ್ಧಗೊಂಡ ರೈತರಿಗೆ ಚಿಂತೆ ತಂದಿಟ್ಟಿವೆ. ಜಿಲ್ಲೆಯ ಹಲವು ರೈತರು ಇನ್ನೂ ಮುಂಗಾರು ಫಸಲಿನ ರಾಶಿಯಲ್ಲಿ ನಿರತರಾಗಿದ್ದಾರೆ. ಮತ್ತಷ್ಟು ರೈತರು ಹಿಂಗಾರಿ ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ. ಕಳೆದ ಎರಡು ವಾರಗಳಿಂದ ಸುರಿದ ಮಳೆ ಎರಡೂ ಕೆಲಸಕ್ಕೆ ಅಡಚಣೆ ತಂದೊಡ್ಡಿದೆ.
ಗಾಯದ ಮೇಲೆ ಬರೆ ಎಂಬಂತೆ ಬಿತ್ತನೆ ಬೀಜಗಳ ದರ ಹೆಚ್ಚಳವಾಗಿದೆ.
ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳಾದ ರಾಗಿ, ಗೋಧಿ, ಕಡಲೆ ದರ ತುಸು ಹೆಚ್ಚಾಗಿದೆ. ಜೋಳ, ಶೇಂಗಾ, ಕುಸುಬೆ ಬೀಜಗಳ ದರ ಕಡಿಮೆಯಾಗಿದೆ. ರಾಜ್ಯದ ಅತಿ ಹೆಚ್ಚು ಬಿತ್ತನೆ ಪ್ರದೇಶ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಇದರ ನೇರ ಪರಿಣಾಮ ತಟ್ಟಿದೆ.