Uncategorized

ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ : ಸಚಿವ ಪ್ರಿಯಾಂಕಾ ‌ಖರ್ಗೆ

ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ. ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ. ಬಜೆಟ್ ಮೇಲೆ ನಮಗೆ ನಿರೀಕ್ಷೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಮೋದಿಯವರ ಮಾಸ್ಟರ್ ಸ್ಟ್ರೋಕ್ ನಿಂದ ನಿರುದ್ಯೋಗ ತಾಂಡವ ಆಡ್ತಾ ಇದೆ. ಮಧ್ಯಮ ವರ್ಗ ನಿರ್ನಾಮವಾಗಿದೆ.  ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಾ ಇದ್ದಾರೆ. ಕರ್ನಾಟಕ ಎರಡನೇ ಹೆಚ್ಚು ಐಟಿ ಕಂಪನಿ ಹೊಂದಿರುವ ರಾಜ್ಯ.‌ ನಾವು 100 ರೂಪಾಯಿ ಟ್ಯಾಕ್ಸ್ ಕಟ್ಟಿದ್ರೆ 12 ರೂಪಾಯಿ ಕೊಡ್ತಾರೆ.‌ಯುಪಿ ಅವರಿಗೆ 120, ಬಿಹಾರ 178 ರೂಪಾಯಿ ಹೋಗ್ತಾ ಇದೆ. ಇಡೀ ಭಾರತ ದೇಶವನ್ನು ನಾವು ಸಮರ್ಥವಾಗಿ ನಡೆಸಿಕೊಂಡು ಹೋಗ್ತಾ ಇದ್ದೇವೆ.‌ ನಮ್ಮ ರಾಜ್ಯದಿಂದಲೇ ಅತೀ ಹೆಚ್ಚು ಉದ್ಯೋಗ ಸೃಷ್ಟಿ ಆಗ್ತಿರೋದು ಅದಕ್ಕೆ ಯಾವುದೇ ನೆರವು ನೀಡೋದಿಲ್ಲ ಅಂದ್ರೆ ಹೇಗೆ..? ಬಜೆಟ್ ಮೇಲೆ ನನಗೆ ಯಾವುದೇ ನಿರೀಕ್ಷೆ ಇಲ್ಲ. ಕಳೆದ ಹತ್ತು ವರ್ಷದಿಂದ ನೋಡಿಕೊಂಡು ಬಂದಿದ್ದೇನೆ. ಅದರ ಆಧಾರದ ಮೇಲೆ ಮಾತನಾಡುತ್ತಿದ್ದೇನೆ ಎಂದರು.

ರಾಜ್ಯದ ಅನುದಾನ ಕಳೆದ ಬಾರಿ ಕೇಳಿದ್ದೆ ಇದುವರೆಗೂ ಬಂದಿಲ್ಲ.ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ಮನವಿ ಪತ್ರ ಕೊಡದೆ ನಾವು ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮಾಡಿದ್ದೇವೆ. ಆದರೂ ಕೂಡ ಕೇಂದ್ರದವರು ಕೊಡಲ್ಲ ಅಂದ್ರೆ? ಕೇಂದ್ರ ಸರ್ಕಾರದಿಂದ ಏನು ಬಂದಿಲ್ಲ ಅಂದ್ರೆ ಕಷ್ಟ ಆಗುತ್ತೆ ಎಂದರು.

ಪ್ರಭಾವಿ ಸಚಿವರ ಸಭೆ ವಿಚಾರವಾಗಿ ಮಾತನಾಡಿ, ಅವರು ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ. ನಮ್ಮ ಮನೆಗೆ, ನಾವು ಅವರ ಮನೆಗೆ ಹೋಗಲೇ ಬಾರದಾ? ಎರಡಮೂರು ದಿನಕ್ಕೊಮ್ಮೆ ನಾನು ಗೃಹ ಸಚಿವರ ಮನೆಯಲ್ಲೇ ಇರ್ತೇನೆ. ನಮ್ಮ ಪಕ್ಷದವರು ಕೂಡ ಹೋಗಬಾರದು ಅಂದ್ರೆ ಹೇಗೆ? ಪರಮೇಶ್ವರ, ಸುರ್ಜೆವಾಲಾ, ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಕರ್ನಾಟಕದ ಬಗ್ಗೆ ಆಗ್ತಾ ಇರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿ ನಾವು ಮೂರುವರೆ ವರ್ಷ ಒಳ್ಳೆಯ ಆಡಳಿತ ಕೊಡ್ತೇವೆ ಎಂದರು.

 

Related Articles

Leave a Reply

Your email address will not be published. Required fields are marked *

Back to top button